# Tags
#ಧಾರ್ಮಿಕ #ವಿಡಿಯೋ

ಉಡುಪಿ ಉಚ್ಚಿಲ ದಸರಾ 2024 : ಸಾಮೂಹಿಕ ಕುಣಿತ ಭಜನಾ ಕಾರ್ಯಕ್ರಮ (Udupi – Uchila Dasara: Kunitha Bhajan Program)

ಉಡುಪಿ ಉಚ್ಚಿಲ ದಸರಾ 2024 : ಸಾಮೂಹಿಕ ಕುಣಿತ ಭಜನಾ ಕಾರ್ಯಕ್ರಮ

(Uchila) ಉಚ್ಚಿಲ: ಉಡುಪಿ ಉಚ್ಚಿಲ ದಸರಾ 2024 ಪ್ರಯುಕ್ತ ಶನಿವಾರ ರಾತ್ರಿ ಸಾಮೂಹಿಕ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.

 ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸುತ್ತಲೂ ಏಕಕಾಲದಲ್ಲಿ ನಡೆದ ಸಾಮೂಹಿಕ ಕುಣಿತ ಭಜನಾ ಕಾರ್ಯಕ್ರಮದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 50 ಕ್ಕೂ ಅಧಿಕ ತಂಡಗಳಿಂದ ಸುಮಾರು ಎರಡು ಸಾವಿರಕ್ಕೂ‌ ಅಧಿಕ ಮಂದಿ ಭಜನಾ ಕಾರ್ಯಕ್ರಮಲ್ಲಿ ಪಾಲ್ಗೊಂಡರು.

 ದಸರಾ ರೂವಾರಿ ನಾಡೋಜ‌ ಡಾ. ಜಿ. ಶಂಕರ್ ಭಜನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

 ಕ್ಷೇತ್ರದ ಪ್ರಧಾನ ಅರ್ಚಕ ವೇ. ಮೂ. ಕೆ.ವಿ. ರಾಘವೇಂದ್ರ ಉಪಾಧ್ಯಾಯ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ‌ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಉಪಾದ್ಯಕ್ಷ ದಿನೇಶ್‌ ಉಚ್ಚಿಲ ಪ್ರಮುಖರಾದ ವಾಸುದೇವ ಸಾಲ್ಯಾನ್, ದಿನೇಶ್‌ ಮೂಳೂರು, ಗುಂಡು ಅಮೀನ್ ಮೊದಲಾದವರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt3 Emedia Advt1 Emedia Advt2