ಎಲ್ಲೂರು: ಉಳ್ಳೂರು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವ, ವಿದ್ಯಾರ್ಥಿಗಳ ದತ್ತು ಸ್ವೀಕಾರ, ವಿದ್ಯಾರ್ಥಿವೇತನ ಕೊಡುಗೆ (Yellur : 18th anniversary of Ullur Sri Durgaparameshwari Sannidhana, adoption of students, Scholarship offering)

ಎಲ್ಲೂರು: ಉಳ್ಳೂರು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವ, ವಿದ್ಯಾರ್ಥಿಗಳ ದತ್ತು ಸ್ವೀಕಾರ, ವಿದ್ಯಾರ್ಥಿವೇತನ ಕೊಡುಗೆ
(Yelluru) ಎಲ್ಲೂರು: ಎಲ್ಲೂರು ಗ್ರಾಮದ ಉಳ್ಳೂರು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದಲ್ಲಿ18ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಮಹಾ ಶ್ರೀ ಚಂಡಿಕಾಯಾಗ ಸಂಪನ್ನಗೊಂಡಿತು.
ವೇದಮೂರ್ತಿ ಶ್ರೀ ಶೇಖರ್ ಶಾಂತಿ ,ಅರ್ಚಕರಾದ ವೇದಮೂರ್ತಿ ಶ್ರೀ ದಿನೇಶ್ ಶಾಂತಿ, ವ್ಯವಸ್ಥಾಪಕರಾದ ವೇದಮೂರ್ತಿ ಶ್ರೀ ಧನಂಜಯ ಶಾಂತಿಯವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ ಸಂಪನ್ನಗೊಂಡಿತು.
ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಲಾಯಿತು. ಇದೇ ಸಂದರ್ಭ ವಾರ್ಷಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.
ಮಹಾ ಶ್ರೀ ಚಂಡಿಕಾಯಾಗದ ಪ್ರಯುಕ್ತ ಮಹಾ ಅನ್ನ ಸಂತರ್ಪಣೆ ನೆರವೇರಿತು. ನೂರಾರು ಭಕ್ತಾಧಿಗಳು ಮಹಾ ಅನ್ನ ಪ್ರಸಾದ ಸ್ವೀಕರಿಸಿದರು.
ಸಂಜೆ ಮಹಾರಂಗಪೂಜೆ, ಭಜನಾ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭ ಅತಿಥಿ ಗಣ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಭಾರತ್ ಬ್ಯಾಂಕಿನ ನಿರ್ದೇಶಕರಾದ ದಯಾನಂದ ಆರ್ ಪೂಜಾರಿ, ಕ್ಷೇತ್ರದ ಅಧ್ಯಕ್ಷರಾದ ಶೇಖರ್ ಶಾಂತಿ, ಅರ್ಚಕರಾದ ದಿನೇಶ್ ಶಾಂತಿ, ವ್ಯವಸ್ಥಾಪಕರಾದ ಧನಂಜಯ ಶಾಂತಿ, ಕೋಶಾಧಿಕಾರಿ ಜಯರಾಮ ಪೂಜಾರಿ, ಜೊತೆ ಕಾರ್ಯದರ್ಶಿ ಪ್ರೊ. ಹರೀಶ್ ಕೋಟ್ಯಾನ್ ಉಪಸ್ಥಿತರಿದ್ದರು.