ಕಾಪು : ಕಾಪು ಕಲ್ಯ ಮಾರಿಗುಡಿಯಲ್ಲಿ ಚಂಡಿಕಾಯಾಗ, ಮಹಾ ಅನ್ನಸಂತರ್ಪಣೆ (Kaup : Chandika Yaga Maha Anna Santarpane at Kaup – Kalya Marigudi)
ಕಾಪು : ಕಾಪು ಕಲ್ಯ ಮಾರಿಗುಡಿಯಲ್ಲಿ ಚಂಡಿಕಾಯಾಗ, ಮಹಾ ಅನ್ನಸಂತರ್ಪಣೆ
(Kaup) ಕಾಪು : ಕಾಪು ಶ್ರೀ ಕಲ್ಯ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಚಂಡಿಕಾ ಮಹಾಯಾಗ, ಪೂರ್ಣಾಹುತಿ ಹಾಗೂ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನೆರವೇರಿತು.
ಕಾಪು ಶ್ರೀ ಜನಾರ್ಧನ ದೇಗುಲದ ತಂತ್ರಿ ವೇ. ಮೂ. ಅನಂತರಾಮ ಕಲ್ಯ ಅವರ ಮಾರ್ಗದರ್ಶನದಲ್ಲಿ ವೇ. ಮೂ. ಕೆ. ಪಿ. ಶ್ರೀನಿವಾಸ ತಂತ್ರಿ ಮಡುಂಬು ನೇತೃತ್ವದಲ್ಲಿ ಅರ್ಚಕ ವೇ. ಮೂ. ನಾರಾಯಣ ತಂತ್ರಿ ಹಾಗೂ ವೈದಿಕರ ಸಹಕಾರದೊಂದಿಗೆ ಚಂಡಿಕಾ ಮಹಾಯಾಗದ ವಿವಿಧ ಧಾರ್ಮಿಕ ವಿಧಾನಗಳು ಸಂಪನ್ನಗೊಂಡವು.
ಬೆಳಗ್ಗೆ ಪ್ರಾರ್ಥನೆ, ಮಧ್ಯಾಹ್ನ ಚಂಡಿಕಾಯಾಗದ ಪೂರ್ಣಾಹುತಿ, ಮಹಾ ಅನ್ನಸಂತರ್ಪಣೆ, ಸಂಜೆ ದೇವಿ ದರ್ಶನ, ಪ್ರಸಾದ ವಿತರಣೆ ನಡೆಯಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್., ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಅರುಣ್ ಕುಮಾರ್ ಬಿ. ಕೆ., ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಶಿಧರ್ ಶೆಟ್ಟಿ ಎರ್ಮಾಳು, ಪ್ರಧಾನ ಕಾರ್ಯದರ್ಶಿ ಶ್ರೀಕರ ಶೆಟ್ಟಿ ಕಲ್ಯಾ ಮತ್ತಿತರರು ಉಪಸ್ಥಿತರಿದ್ದರು.