# Tags
#ರಾಜಕೀಯ

ಕಾಪು ಬಿಜೆಪಿ, ರೈತ ಮೋರ್ಚಾದಿಂದ ಮಾಹಿತಿ ಶಿಬಿರ

ಕಾಪು ಭಾರತೀಯ ಜನತಾ ಪಾರ್ಟಿ,  ಮಂಡಲ ಮತ್ತು ರೈತ ಮೋರ್ಚಾ ಕಾಪು ಮಂಡಲ ವತಿಯಿಂದ ಮಾಹಿತಿ ಶಿಬಿರ
(Kaup) ಕಾಪು : ಕೃಷಿ ವಲಯದಲ್ಲಿ ಉತ್ಪಾದನೆ ಹೆಚ್ಚಿಸಲು ಮತ್ತು ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿ ದೇಶದ ಆರ್ಥಿಕತೆಯಲ್ಲಿ ಮತ್ತು ಅಭಿವೃದ್ಧಿಯಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡಬೇಕೇಂದು ರೈತರಿಗೆ ಮತ್ತು ರೈತ ಮಹಿಳೆಯರಿಗೆ ಜಿಲ್ಲಾ ಕೃಷಿಯ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮ ಕರೆ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ಭಾರತೀಯ ಜನತಾ ಪಾರ್ಟಿ ಕಾಪು ಮಂಡಲದ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರು ವಹಿಸಿದ್ದರು. ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್‌ರವರು ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ನೋಂದಾವಣಿಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕೃಷಿ ಕೇಂದ್ರದಲ್ಲಿ ಸಾಧನೆಗೈದ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷರಾದ ಬಂಟಕಲ್ಲು ರಾಮಕೃಷ್ಣ ಶರ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಸಂಧ್ಯಾ ರಮೇಶ್, ಕ್ಷೇತ್ರ ಪ್ರಧಾನಕಾರ್ಯದರ್ಶಿಯಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ರೈತ ಮೋರ್ಚಾದ ಅಧ್ಯಕ್ಷರಾದ ಕೃಷ್ಣ ರಾವ್, ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಕೇಶವ ಮೊಯ್ಲಿ, ಹರೀಶ್ ಕುಲಾಲ್ ರೈತ ಮೋರ್ಚಾದ ಉಪಾಧ್ಯಕ್ಷರಾದ ಚಂದ್ರಹಾಸ್ ಕೋಟ್ಯಾನ್ , ಕೋಶಾಧಿಕಾರಿ ಗಿರೀಶ್ ಪಾಂಗಾಳ, ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ಪ್ರಧಾನ ಕಾರ್ಯದರ್ಶಿ ಸಂಧ್ಯಾ ಕಾಮತ್ ಮತ್ತು ಪಕ್ಷದ ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt1