ಕೆಇಎ – ಸಿಇಟಿ ಇಂಜಿನಿಯರಿಂಗ್ ಪ್ರವೇಶಾತಿ ಕುರಿತಾದ ಮಾರ್ಗದರ್ಶನ ಕಾರ್ಯಕ್ರಮ (Awareness program on admission through CET-KEA process at Bantakal College)
ಕೆಇಎ – ಸಿಇಟಿ ಇಂಜಿನಿಯರಿಂಗ್ ಪ್ರವೇಶಾತಿ ಕುರಿತಾದ ಮಾರ್ಗದರ್ಶನ ಕಾರ್ಯಕ್ರಮ
ಕಾಲೇಜಿನ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ರವರಿಂದ ಉಪನ್ಯಾಸ.
(Bantakal) ಬಂಟಕಲ್: ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಕೆಇಎ-ಸಿಇಟಿ ಮುಖಾಂತರ ಇಂಜಿನಿಯರಿಂಗ್ ಪ್ರವೇಶಾತಿ ಪ್ರಕ್ರಿಯೆ ಕುರಿತಂತೆ ಮಾರ್ಗದರ್ಶನ ಕಾರ್ಯಕ್ರವನ್ನು ಸಂಸ್ಥೆಯ ಆವರಣದಲ್ಲಿ ದಿನಾಂಕ 29 ಜೂನ್ 2024ರಂದು ಅಪರಾಹ್ನ 2-30 ಗಂಟೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಸಿಇಟಿ ಪ್ರವೇಶಾತಿ ಪ್ರಕ್ರಿಯೆ, ದಾಖಲಾತಿ ಪರಿಶೀಲನೆ, ಕಾಲೇಜು ಮತ್ತು ಕೋರ್ಸ್ ಆಯ್ಕೆ ಕುರಿತಾದ ಸಮಗ್ರ ಮಾಹಿತಿಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ (Pricipal prof. Dr. Tirumaleshwara Bhat) ರವರು ತಮ್ಮ ಉಪನ್ಯಾಸದಲ್ಲಿ ವಿವರಿಸಲಿದ್ದಾರೆ.
ಉಡುಪಿ ಆಸುಪಾಸಿನ ಪರಿಸರದ ಇಂಜಿನಿಯರಿಂಗ್ ಆಕಾಂಕ್ಷಿಗಳ ಅನುಕೂಲಕ್ಕಾಗಿ ಸಂಸ್ಥೆಯು ಈ ಕಾರ್ಯಕ್ರಮವನ್ನು ಆಯೋಜಿಸಿದೆ.
ವಿದ್ಯಾರ್ಥಿಗಳು ಮತ್ತು ಪೋಷಕರು ಈ ಕಾರ್ಯಕ್ರಮಕ್ಕೆ ಹಾಜರಾಗಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆಯಬೇಕಾಗಿ ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದೆ.