• Home  
  • ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ (Tamboola Prashna Consultation at Kodavoor Sri Shankaranarayana Temple)
- ಧಾರ್ಮಿಕ

ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ (Tamboola Prashna Consultation at Kodavoor Sri Shankaranarayana Temple)

Share: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ  ಜ. 20 ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ನಡೆದ ಪ್ರಶ್ನಾ ಚಿಂತನೆ   (Kodavooru) ಕೊಡವೂರು: ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ  ಶ್ರೀದೇವಳದಲ್ಲಿ ನಡೆಯಲಿರುವ ದುರಸ್ತಿ ಕಾರ್ಯಗಳು, ಪ್ರಾಯಶ್ಚಿತ ಕೆಲಸಗಳ ಸಲುವಾಗಿ  ತಾಂಬೂಲ ಪ್ರಶ್ನಾ ಚಿಂತನೆ   ಇಡಲಾಯಿತು.  ವಿದ್ವಾನ್ ಗೋಪಾಲ ಜೋಯಿಸರು, ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗೂ ಪುತ್ತೂರು ವಾದಿರಾಜ ತಂತ್ರಿ ನೇತೃತ್ವದಲ್ಲಿ ತಾಂಬೂಲ […]

  (Kodavooru) ಕೊಡವೂರು: ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ  ಶ್ರೀದೇವಳದಲ್ಲಿ ನಡೆಯಲಿರುವ ದುರಸ್ತಿ ಕಾರ್ಯಗಳು, ಪ್ರಾಯಶ್ಚಿತ ಕೆಲಸಗಳ ಸಲುವಾಗಿ  ತಾಂಬೂಲ ಪ್ರಶ್ನಾ ಚಿಂತನೆ   ಇಡಲಾಯಿತು.

 ವಿದ್ವಾನ್ ಗೋಪಾಲ ಜೋಯಿಸರು, ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗೂ ಪುತ್ತೂರು ವಾದಿರಾಜ ತಂತ್ರಿ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆಯನ್ನು ನೆರವೇರಿಸಿದರು. ಪ್ರಾರಂಭದಿಂದ ಕೊನೆಯತನಕವು ಒಳ್ಳೆಯ ರಾಶಿ ಮೂಲಕ ಆಡಳಿತ ಮಂಡಳಿ ಕಾರ್ಯಗತ ಗೊಳಿಸುತ್ತಿರುವ ಕಾಮಗಾರಿಗಳಿಗೆ ದೇವರ ಅಪ್ಪಣೆ ಸಿಕ್ಕಿತು.

  ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ತೊಟ್ಟಂ ಮಧುಸೂದನ ತಂತ್ರಿ, ಪವಿತ್ರಪಾಣಿ ಜನಾರ್ದನ್ ಕೊಡವೂರು, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸೀತಾರಾಮ ಆಚಾರ್ಯ, ವಾದಿರಾಜ ಸಾಲ್ಯಾನ್, ಭಾಸ್ಕರ್ ಪಾಲನ್, ಕೆ. ಬಾಬ, ಉಷಾ ಆನಂದ ಸುವರ್ಣ, ಶೀಲಾ ದೇವಾಡಿಗ, ಚಂದನ್ ಭಟ್, ಭಕ್ತವೃಂದ ಕಾರ್ಯದರ್ಶಿ ರಾಮ ಸೇರಿಗಾರ್, ಭಗವತಿ ಮಾರಿ ಅಮ್ಮ ಕಟ್ಟಡ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಟಿ., ಶಿವಪ್ಪ ಕಾಂಚನ್, ವಾಸುದೇವ ಉಪಾಧ್ಯ ಮೊದಲಾದವರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.