# Tags
#ರಾಜಕೀಯ

ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ : ಸಿಎಂ (Let HD Kumara swamy, who is out on bail, Resign; CM Siddaramaiah)

ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ : ಸಿಎಂ

(Bengaluru) ಬೆಂಗಳೂರು: ಬಿಜೆಪಿಯವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜಿನಾಮೆ ಕೊಡುತ್ತಾರೆ ಎನ್ನುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮೊದಲು ಕುಮಾರಸ್ವಾಮಿಯವರು ರಾಜಿನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹ ವ್ಯಕ್ತಪಡಿಸಿದರು. 

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 17 ಎ ಪ್ರಕಾರ ಎಫ್ ಐ ಆರ್  ದಾಖಲು ಮಾಡಿ, ತನಿಖೆ ಮಾಡುತ್ತಾರೆ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್ ಐ ಆರ್ ದಾಖಲಿಸಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅವರು ರಾಜಿನಾಮೆ ಕೊಡುತ್ತಾರೆಯೇ ?  ಎಂದು ಸಿಎಂ ಸಿದ್ದರಾಮಯ್ಯರವರು ಪ್ರಶ್ನಿಸಿದರು.

ಬಿಜೆಪಿಯವರು, ಸಿಎಂ ರಾಜಿನಾಮೆ ಕೊಡುತ್ತಾರೆ ಎನ್ನುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮೊದಲು ಕುಮಾರಸ್ವಾಮಿಯವರು ರಾಜಿನಾಮೆ ನೀಡಲಿ.  ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜಿನಾಮೆ ನೀಡಬೇಕಾಗುತ್ತದೆ ಎಂದರು.

Leave a comment

Your email address will not be published. Required fields are marked *

Emedia Advt3 Emedia Advt1 Emedia Advt2