# Tags
#ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ (Engineer’s day celebration at SMVITM Bantakal)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

(Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಐ ಎಸ್ ಟಿ ಇ ವಿದ್ಯಾರ್ಥಿ ಘಟಕದ ವತಿಯಿಂದ ದೇಶದ ಮಹಾನ್ ವ್ಯಕ್ತಿಗಳಲ್ಲಿ ಒಬ್ಬರಾದ ಸರ್ ಎಮ್ ವಿಶ್ವೇಶ್ವರಯ್ಯನವರ ೧೬೫ನೇ ಜನ್ಮ ದಿನದ ಪ್ರಯುಕ್ತ ಇಂಜಿನಿಯರ್ ದಿನಾಚರಣೆಯನ್ನು ಆಚರಿಸಲಾಯಿತು.

 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎ ಜಿ ಅಸೋಸಿಯೇಟ್ಸ್‌ನ ಇಂಜಿನಿಯರ್  ಯೋಗೀಶ್ ಚಂದ್ರ ಧಾರಾ ಇವರು ಭಾಗವಹಿಸಿದ್ದರು.

ಅವರು ಮಾತನಾಡಿ, ಸರ್ ಎಮ್  ವಿಶ್ವೇಶ್ವರಯ್ಯನವರು ನಮ್ಮ ದೇಶಕ್ಕೆ ನೀಡಿದ ಕೊಡುಗೆಯ ಬಗ್ಗೆ  ಸ್ಮರಿಸಿದರು.  ವಿಶ್ವೇಶ್ವರಯ್ಯನವರು ತಮ್ಮ ಜೀವನದಲ್ಲಿ ಅನುಸರಿಸುತ್ತಿದ್ದ ಶಿಸ್ತು, ಸಂಯಮ, ಪ್ರಾಮಾಣಿಕತೆ ಮತ್ತು ಸಮಯ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಇಂತಹ ಮೌಲ್ಯಗಳನ್ನು ಅನುಸರಿಸಬೇಕೆಂದು ತಿಳಿಸಿದರು.

ಸಂಸ್ಥೆಯ ಉಪ ಪ್ರಾಂಶುಪಾಲ ಡಾ. ಗಣೇಶ್ ಐತಾಳ್  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,  ವಿದ್ಯಾರ್ಥಿಗಳಿಗೆ  ಇಂಜಿನಿಯರಿಂಗ್ ದಿನದ ಮಹತ್ವದ ಬಗ್ಗೆ ತಿಳಿಸಿದರು.

 ವಿದ್ಯಾರ್ಥಿನಿಯಾದ ಚಿತ್ಕಲಾರವರು ಪ್ರಾರ್ಥಿಸಿದರು. ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕಿ  ಅಕ್ಷತಾರಾವ್  ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಡೀನ್‌ಗಳು, ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt3 Emedia Advt1 Emedia Advt2