• Home  
  • ವಿದ್ಯಾ ಪ್ರಕಾಶ್ ಅಮ್ಮಣ್ಣಾಯರವರ “ಭಕ್ತಿ ಭಾವ ಲಹರಿ” ಗೀತಾ ಸಂಕಲನ ಬಿಡುಗಡೆ (Vidya Prakash Ammannaya’s “Bhakti Bhava Lahari” Gita compilation released)
- ಸಂಘ, ಸಂಸ್ಥೆಗಳು

ವಿದ್ಯಾ ಪ್ರಕಾಶ್ ಅಮ್ಮಣ್ಣಾಯರವರ “ಭಕ್ತಿ ಭಾವ ಲಹರಿ” ಗೀತಾ ಸಂಕಲನ ಬಿಡುಗಡೆ (Vidya Prakash Ammannaya’s “Bhakti Bhava Lahari” Gita compilation released)

Share: ವಿದ್ಯಾ ಪ್ರಕಾಶ್ ಅಮ್ಮಣ್ಣಾಯರವರ “ಭಕ್ತಿ ಭಾವ ಲಹರಿ” ಗೀತಾ ಸಂಕಲನ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಪು ತಾಲೂಕು ಕಸಾಪ ಅಧ್ಯಕ್ಷ ಪುಂಡಲೀಕ ಮರಾಠೆ (Bantakal) ಬಂಟಕಲ್:‌ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕದ ಆಶ್ರಯದಲ್ಲಿ ಬಂಟಕಲ್ಲು ಕಸಾಪ ಕಾಪು ತಾಲೂಕು ಕಾರ್ಯಾಲಯ “ನುಡಿ”ಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ ಇಲ್ಲಿನ ಸಹ ಪ್ರಾಧ್ಯಾಪಕರಾದ ವಿದ್ಯಾ ಪ್ರಕಾಶ್ ಅಮ್ಮಣ್ಣಾಯರವರ “ಭಕ್ತಿ ಭಾವ […]

(Bantakal) ಬಂಟಕಲ್:‌ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕದ ಆಶ್ರಯದಲ್ಲಿ ಬಂಟಕಲ್ಲು ಕಸಾಪ ಕಾಪು ತಾಲೂಕು ಕಾರ್ಯಾಲಯ “ನುಡಿ”ಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ ಇಲ್ಲಿನ ಸಹ ಪ್ರಾಧ್ಯಾಪಕರಾದ ವಿದ್ಯಾ ಪ್ರಕಾಶ್ ಅಮ್ಮಣ್ಣಾಯರವರ “ಭಕ್ತಿ ಭಾವ ಲಹರಿ” -ಗೀತಾ ಸಂಕಲನವನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಬಿಡುಗಡೆ ಗೊಳಿಸಿದರು.

  ನಂತರ ಮಾತನಾಡಿದ ಅವರು, ಧ್ವನಿ ಕಾವ್ಯದ ಆತ್ಮ ಎನ್ನುವ ಮಾತಿಗೆ ಪೂರಕವಾಗಿದೆ. ವಿದ್ಯಾ ಇವರ ಕಾವ್ಯ ರಚನೆಗಳಲ್ಲಿ ಭಕ್ತಿ ಭಾವ ತುಂಬಿ ತುಳುಕುವುದರಿಂದ ಸುಶ್ರಾವ್ಯವಾಗಿ ಹಾಡುವ ಕೀರ್ತನೆಗಳಾಗಿವೆ. ಭಜನೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಬಳಸಲು ಸ್ವರ ಸಂಯೋಜನೆ ಮಾಡಿ ಹಾಡಲು ಯೋಗ್ಯವಾಗಿದೆ ಎಂದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ತಾಲೂಕು ಕಸಾಪ ಅಧ್ಯಕ್ಷ ಪುಂಡಲೀಕ ಮರಾಠೆ ವಹಿಸಿದ್ದರು.

   ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಜಿಲ್ಲಾ ಕೋಶಾಧಿಕಾರಿ ಮೋಹರ್, ತಾಲೂಕು ಘಟಕದ ಗೌರವ ಸಲಹಾ ಸಮಿತಿ ಜಿಲ್ಲಾ ಪ್ರತಿನಿಧಿ ಕೆ. ದೇವದಾಸ್ ಹೆಬ್ಬಾರ್, ಕಾಪು ತಾಲೂಕು ಘಟಕದ ಗೌ. ಕಾರ್ಯದರ್ಶಿ ನೀಲಾನಂದ ನಾಯ್ಕ್, ತಾಲೂಕು ಕೋಶಾಧಿಕಾರಿ ವಿದ್ಯಾಧರ್ ಪುರಾಣಿಕ್, ಸಂಘಟನಾ ಕಾರ್ಯದರ್ಶಿ ದೀಪಕ್ ಬೀರ ಪಡುಬಿದ್ರಿ, ನಿವೃತ್ತ ಉಪನ್ಯಾಸಕ ಕೆ. ಭಾಸ್ಕರ ಕಾಮತ್, ಸತ್ಯಸಾಯಿ ಪ್ರಸಾದ್, ಮಧುಕರ್ ಎಸ್. ಕಲ್ಯಾ, ಜಿನೇಶ್ ಬಲ್ಲಾಳ್ ಕುತ್ಯಾರು, ಸುಂದರ ಟಿ. ಪಾಂಬೂರು ಉಪಸ್ಥಿತರಿದ್ದರು.

 ಸಹ ಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಮಟ್ಟು ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.