# Tags
#ಸಂಘ, ಸಂಸ್ಥೆಗಳು

ಸುರತ್ಕಲ್ ಬಂಟರಭವನದಲ್ಲಿ ಜಯಲಕ್ಷ್ಮಿ ಸಿಲ್ಕ್   ವತಿಯಿಂದ ಸಾರಿ ಮೇಳ  (“Saari Mela” By Jayalaxmi Silks Udupi at Surathkal Bants Sangha)

ಸುರತ್ಕಲ್ ಬಂಟರ ಭವನದಲ್ಲಿ ಜಯಲಕ್ಷ್ಮಿ ಸಿಲ್ಕ್ ವತಿಯಿಂದ ಸಾರಿ ಮೇಳ

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ಸಂಘಟನಾತ್ಮಕ ಚಟುವಟಿಕೆ: ಪ್ರಿಯಾ ಗಿರೀಶ್ ಶೆಟ್ಟಿ

 (Surathkal) ಸುರತ್ಕಲ್: ಸಂಘಟನಾತ್ಮಕ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುವುದರ ಮೂಲಕ ಸಮಾಜ ಬಲಿಷ್ಠವಾಗಲು ಸಾಧ್ಯ ಎಂದು ಶ್ರೀಮತಿ ಪ್ರಿಯಾ ಗಿರೀಶ್ ಶೆಟ್ಟಿ ಕಟೀಲು ನುಡಿದರು.

    ಅವರು ಸುರತ್ಕಲ್ ಬಂಟರ ಭವನದಲ್ಲಿ ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ವತಿಯಿಂದ  ಜಯಲಕ್ಷ್ಮಿ ಸಿಲ್ಕ್ ಉದ್ಯಾವರ, ಉಡುಪಿ ವತಿಯಿಂದ ನಡೆದ ಸಾರಿ ಮೇಳದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

  ಬಂಟರ ಸಂಘವು ಹಲವಾರು ಜನಪರ ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಿರುವುದು ಇತರ ಸಂಘಗಳಿಗೆ ಮಾದರಿಯಾಗಿದೆ ಎಂದರು.

 ವೇದಿಕೆಯಲ್ಲಿ ಮಹಿಳಾ ವೇದಿಕೆ ಅಧ್ಯಕ್ಷೆ ಭವ್ಯಾ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷೆ  ಚಿತ್ರಾ ಜೆ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಉಪಾಧ್ಯಕ್ಷ ಪುಷ್ಷರಾಜ್ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಕೋಶಾಧಿಕಾರಿ ಅವಿನಾಶ್ ಶೆಟ್ಟಿ, ನಿಕಟ ಪೂರ್ವಾಧ್ಯಕ್ಷ ಸುಧಾಕರ ಪೂಂಜ, ಮಾಜಿ ಅಧ್ಯಕ್ಷ ಉಲ್ಲಾಸ್ ಆರ್  ಶೆಟ್ಟಿ ಪೆರ್ಮುದೆ, ಮಹಿಳಾ ವೇದಿಕೆಯ ಮಾಜಿ ಅಧ್ಯಕ್ಷರಾದ ಬೇಬಿ ಶೆಟ್ಟಿ, ಚಂದ್ರಕಲಾ ಶೆಟ್ಟಿ, ಉಪಾಧ್ಯಕ್ಷೆ ಸರೋಜ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಜಾತ ಶೆಟ್ಟಿ ಕೃಷ್ಣಾಪುರ, ಕೋಶಾಧಿಕಾರಿ ಜ್ಯೋತಿ ಪ್ರವೀಣ್ ಶೆಟ್ಟಿ, ಜತೆ ಕಾರ್ಯದರ್ಶಿ ವಜ್ರಾಕ್ಷಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಸುಜಾತ ಶೆಟ್ಟಿ ಕಾಟಿಪಳ್ಳ, ಸಂಘಟನಾ ಕಾರ್ಯದರ್ಶಿ ನಾಗಲತಾ ಶೆಟ್ಟಿ ತೋಕೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

   ರಾಜೇಶ್ವರಿ ಡಿ ಶೆಟ್ಟಿ ಕಾರ್ಯಕ್ರಮ‌ ನಿರ್ವಹಿಸಿದರು.

Leave a comment

Your email address will not be published. Required fields are marked *

Emedia Advt3 Emedia Advt1 Emedia Advt2