ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವರ ಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಉಚಿತ ಸಮವಸ್ತ್ರ ವಿತರಣೆ
ಉಚ್ಚಿಲ ಸರಸ್ವತಿ ಮಂದಿರ ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ವಿತರಣೆ
(Uchila) ಉಚ್ಚಿಲ : ಉಚ್ಚಿಲ ಸರಸ್ವತಿ ಮಂದಿರ ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚ್ಚಿಲ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವರ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸಮವಸ್ತ್ರ ನೀಡಿ ಪ್ರೋತ್ಸಾಹಿಸಲಾಯಿತು.
ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಉಚ್ಚಿಲ ಬಿಲ್ಲವರ ಸೇವಾ ಸಂಘದ ಅಧ್ಯಕ್ಷರಾದ ಸದಾಶಿವ ಪೂಜಾರಿ, ಟ್ರಸ್ಟ್ ನ ಗೌರವ ಸದಸ್ಯರಾದ ಅನಿಲ್ ಕುಮಾರ್, ಧನಂಜಯ ಡಿ ಅಮೀನ್, ತುಂಬೆ ಕರ್ಕೇರ ಸಭಾಭವನದ ವ್ಯವಸ್ಥಾಪಕರಾದ ಸುಧಾಕರ ಪೂಜಾರಿ ಪೊಲ್ಯ, ಸರಸ್ವತಿ ಮಂದಿರ ಪ್ರೌಡ ಶಾಲಾ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಗೀತಾ ವೈ, ಉಭಯ ಶಾಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

