• Home  
  • ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ (The founder of Kinnigoli Yugapurusha. Kodtturu Anantha Padmanabha Udupa memorial service)
- ಸನ್ಮಾನ, ಅಭಿನಂದನೆ - ಸಹಾಯ ಹಸ್ತ

ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ (The founder of Kinnigoli Yugapurusha. Kodtturu Anantha Padmanabha Udupa memorial service)

Share:  ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ ಅಕಾಡೆಮಿ ಸಾಹಿತ್ಯಕ್ಕೆ  ಮೀಸಲಾಗಬೇಡಿ, ಸಂಸ್ಕೃತಿ, ಸಂಸ್ಕಾರ ಪಸರಿಸಿ: ಶಾಸಕ ಉಮಾನಾಥ ಕೋಟ್ಯಾನ್  (Moolki) ಮೂಲ್ಕಿ : ಪ್ರಶಸ್ತಿಗೆ ವ್ಯಕ್ತಿ ಮುಖ್ಯವಲ್ಲ, ವ್ಯಕ್ತಿತ್ವ ಪ್ರಾಮುಖ್ಯ. ಅಕಾಡೆಮಿಗಳು  ಸಾಹಿತ್ಯಕ್ಕೆ ಸೀಮಿತವಾಗದೇ ತುಳುನಾಡಿನ ಸಂಸ್ಕಾರ, ಸಂಸ್ಕೃತಿಯನ್ನು ಪಸರಿಸಬೇಕು. ಸಮಾಜದಲ್ಲಿ ಸಾಹಿತ್ಯದ ಜೊತೆ ಜೊತೆಗೆ ಸಮಾಜ ಸ್ಪಂದನೆಯೂ ಮುಖ್ಯ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.   ಅವರು ಕಿನ್ನಿಗೋಳಿ ಯುಗಪುರುಷದ ಸಂಸ್ಥಾಪಕ ದಿ. ಕೊಡತ್ತೂರು ಅನಂತಪದ್ಮನಾಭ ಉಡುಪರ […]

 (Moolki) ಮೂಲ್ಕಿ : ಪ್ರಶಸ್ತಿಗೆ ವ್ಯಕ್ತಿ ಮುಖ್ಯವಲ್ಲ, ವ್ಯಕ್ತಿತ್ವ ಪ್ರಾಮುಖ್ಯ. ಅಕಾಡೆಮಿಗಳು  ಸಾಹಿತ್ಯಕ್ಕೆ ಸೀಮಿತವಾಗದೇ ತುಳುನಾಡಿನ ಸಂಸ್ಕಾರ, ಸಂಸ್ಕೃತಿಯನ್ನು ಪಸರಿಸಬೇಕು. ಸಮಾಜದಲ್ಲಿ ಸಾಹಿತ್ಯದ ಜೊತೆ ಜೊತೆಗೆ ಸಮಾಜ ಸ್ಪಂದನೆಯೂ ಮುಖ್ಯ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

  ಅವರು ಕಿನ್ನಿಗೋಳಿ ಯುಗಪುರುಷದ ಸಂಸ್ಥಾಪಕ ದಿ. ಕೊಡತ್ತೂರು ಅನಂತಪದ್ಮನಾಭ ಉಡುಪರ ಸಂಸ್ಮರಣ ಸಮಾರಂಭದಲ್ಲಿ, ಕೊ. ಅ. ಉಡುಪ ಪ್ರಶಸ್ತಿ ಪ್ರದಾನ, ವೇದವಿದ್ವಾಂಸರ ಸನ್ಮಾನ, ಕೃತಿ ಬಿಡುಗಡೆ, ವಿದ್ಯಾರ್ಥಿವೇತನ ವಿತರಣಾ  ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

  ಕಟೀಲು ದೇವಳದ  ಪ್ರಧಾನ ಅರ್ಚಕ ಕೆ. ಲಕ್ಷ್ಮೀನಾರಾಯಣ ಅಸ್ರಣ್ಣ  ಶುಭ ಹಾರೈಸಿದರು.

 ದ.ಕ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ  ಪ್ರದೀಪಕುಮಾರ್ ಕಲ್ಕೂರರವರು ಸಂಸ್ಮರಣ ಭಾಷಣ ಮಾಡಿದರು.

 ಯುಗಪುರುಷ ಪ್ರಕಟಣಾಲಯದಿಂದ ಪ್ರಕಟಿತ ಪಿ.ವಿ. ಪ್ರದೀಪ್‌ಕುಮಾರ್ ಕಥಾಬಿಂದು ರಚಿತ ಅದಿತಿ ಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಬಿಡುಗಡೆಗೊಳಿಸಿದರು.

 ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರಿಗೆ ಹತ್ತು ಸಾವಿರ ನಗದು ಸಹಿತ ಕೊ. ಅ. ಉಡುಪ ಪ್ರಶಸ್ತಿ ಹಾಗೂ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕ ರಾಮದಾಸ ಆಚಾರ್ಯ ಅವರನ್ನು ಕಮಲಾಕ್ಷಿ ಉಡುಪ ಸ್ಮರಣಾರ್ಥ ವೇದ ವಿದ್ವಾಂಸರ ನೆಲೆಯಲ್ಲಿ ಗೌರವಿಸಲಾಯಿತು.

 ಕಾವೇರಿ, ಡೆನ್ಸಿಕಾ ಪಿರೇರಾ, ಆಯುಷ್, ಚೇತನ್ ವೈ ಶೆಟ್ಟಿಗಾರ್, ಯಜ್ಞ, ಕಿರಣ್ ದೇವಾಡಿಗ, ಲಕ್ಷ್ಮೀ ಉಡುಪ, ಅಂಜಲಿ, ಮನ್ವಿತಾ, ಸಿಂಚನಾ ಆಚಾರ್ಯ, ಸುಪ್ರಿತಾ, ಶ್ರಿಯಾ ಪೂಜಾರಿ, ಖುಷಿ, ತ್ರಿಶಾ ಪೂಜಾರಿ, ಕಿರಣ್ ಅವರಿಗೆ ವಿದ್ಯಾ ನಿಧಿಯನ್ನು ವಿತರಿಸಲಾಯಿತು.

 ಅನ್ಯ ಆಚಾರ್ಯ ಹಾಗೂ ಸ್ವಾತಿ ಎಸ್. ಶೆಟ್ಟಿ ಅವರನ್ನು ಗೌರವಿಸಲಾಯಿತು.

 ಮುಂಬಯಿ ಉದ್ಯಮಿ ತಾಳಿಪಾಡಿ ರಾಮಚಂದ್ರ ಶೆಟ್ಟಿ, ಪೃಥ್ವಿರಾಜ್ ಆಚಾರ್ಯ, ಕಿನ್ನಿಗೋಳಿ ಪಟ್ಟಣ ಪಂಚಾಯತಿ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ, ಹರಿಶ್ಚಂದ್ರ ಸಾಲ್ಯಾನ್, ಜಯರಾಂ ಉಡುಪ, ಕೃತಿಕಾರ ಪಿ.ವಿ. ಪ್ರದೀಪ್‌ಕುಮಾರ್, ಡಾ. ನಯನಾಭಿರಾಮ ಉಡುಪ ಇದ್ದರು.

 ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ತಂಡದ ಕಲಾವಿದರಿಂದ ಶ್ರೀ ಹರಿ ಲೀಲಾರ್ವಣ ಯಕ್ಷಗಾನ ಪ್ರಸಂಗ ನಡೆಯಿತು.  ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಸ್ವಾಗತಿಸಿದರು. ಅನುಷಾ ಕರ್ಕೇರ, ಗುರುರಾಜ್ ಭಟ್, ಶರತ್ ಶೆಟ್ಟಿ ನಿರೂಪಿಸಿದರು

Leave a comment

Your email address will not be published. Required fields are marked *

eMedia Kannada  @2025. All Rights Reserved.