• Home  
  • ಗೆಳೆಯರ ಬಳಗ – ಕಾರಂತ ಪುರಸ್ಕಾರ – 2026 :  ರಾಮ ಮೊಗವೀರ ಕೋಟ ಆಯ್ಕೆ (Friends Group – Karanth Puraskar – 2026: Rama Mogaveera Kota selected)
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

ಗೆಳೆಯರ ಬಳಗ – ಕಾರಂತ ಪುರಸ್ಕಾರ – 2026 :  ರಾಮ ಮೊಗವೀರ ಕೋಟ ಆಯ್ಕೆ (Friends Group – Karanth Puraskar – 2026: Rama Mogaveera Kota selected)

Share: ಗೆಳೆಯರ ಬಳಗ – ಕಾರಂತ ಪುರಸ್ಕಾರ – 2026   ರಾಮ ಮೊಗವೀರ ಕೋಟ ಆಯ್ಕೆ ಅ. 11: ಸಾಲಿಗ್ರಾಮ ಶ್ರೀ ಗುರುನರಸಿಂಹ ಬಯಲು ರಂಗ ಮಂದಿರದಲ್ಲಿ ನಡೆಯಲಿರುವ ಸನ್ಮಾನ (Saligrama) ಸಾಲಿಗ್ರಾಮ : ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮ ಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ‘ಗೆಳೆಯರ ಬಳಗ, ಕಾರಂತ ಪುರಸ್ಕಾರ – 2026 ಪ್ರಶಸ್ತಿಗೆ ಈ ನಾಡಿನ ಹಿರಿಯರಾದ ಕಾರಂತರ ಆತ್ಮೀಯ ಒಡನಾಡಿ […]

(Saligrama) ಸಾಲಿಗ್ರಾಮ : ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮ ಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ‘ಗೆಳೆಯರ ಬಳಗ, ಕಾರಂತ ಪುರಸ್ಕಾರ – 2026 ಪ್ರಶಸ್ತಿಗೆ ಈ ನಾಡಿನ ಹಿರಿಯರಾದ ಕಾರಂತರ ಆತ್ಮೀಯ ಒಡನಾಡಿ ರಾಮ ಮೊಗವೀರ ಕೋಟ ಆಯ್ಕೆಯಾಗಿದ್ದಾರೆ.

  ಈ ಹಿಂದೆ ಶ್ರೀಮತಿ ಮಾಲಿನಿ ಮಲ್ಯ, ಎಸ್. ನಾರಾಯಣ ರಾವ್, ಪೇತ್ರಿ ಮಾಧವ ನಾಯಕ್, ಶ್ರೀನಿವಾಸ ಸಾಸ್ತಾನ,  ಹಿರಿಯಡ್ಕ ಗೋಪಾಲರಾವ್, ಎಚ್. ಇಬ್ರಾಹಿಂ ಸಾಹೇಬ್,  ಪಾಂಡೇಶ್ವರ ಚಂದ್ರಶೇಖರ ಚಡಗ, ಬನ್ನಂಜೆ ಸಂಜೀವ ಸುವರ್ಣ, ಶ್ರೀಮತಿ ವೈದೇಹಿ, ಡಾ ನಾ ಮೊಗಸಾಲೆ ಹಾಗೂ ಶ್ರೀಮತಿ ಶಾಕುಂತಲಾ ಭಟ್ , ಗೆಳೆಯರ ಬಳಗ ಕಾರಂತ ಪುರಸ್ಕಾರ”ಪಡೆದವರಾಗಿದ್ದಾರೆ.

   ಈ ಪುರಸ್ಕಾರವು ಗೌರವಧನ ಹಾಗೂ ಸನ್ಮಾನ ಪತ್ರ, ಫಲಪುಷ್ಪ, ಶಾಲು ಇತ್ಯಾದಿಯಿಂದ ಕೂಡಿರುತ್ತದೆ.

 ಗೆಳೆಯರ ಬಳಗ ಕಾರಂತ ಪುರಸ್ಕಾರ-2026 ನ್ನು ಅಕ್ಟೋಬರ್ 11ರ ಆದಿತ್ಯವಾರ ಸಂಜೆ  ಸಾಲಿಗ್ರಾಮ ಶ್ರೀ ಗುರುನರಸಿಂಹ ಬಯಲು ರಂಗ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು.

 ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದು ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ತಿಳಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.