# Tags

ಬೈಂದೂರಿನ ಉಪ್ಪುಂದ ಕರ್ಕಿಕಳಿ ಬಳಿ ನಾಡ ದೋಣಿ ದುರಂತ: ಓರ್ವ ಸಾವು, ಮತ್ತೋರ್ವ ನಾಪತ್ತೆ

ಬೈಂದೂರಿನ ಉಪ್ಪುಂದ ಕರ್ಕಿಕಳಿ ಬಳಿ ನಾಡ ದೋಣಿ ದುರಂತ: ಓರ್ವ ಸಾವು, ಮತ್ತೋರ್ವ ನಾಪತ್ತೆ ಉಪ್ಪುಂದ: ಉಪ್ಪುಂದ ಮಡಿಕಲ್‌ ನ ಕರ್ಕಿಕಳಿ ಎಂಬಲ್ಲಿ ಮೀನುಗಾರಿಕೆಗೆ ತೆರಳಿದ್ದ ೮ ಜನರಿದ್ದ ನಾಡ  ದೋಣಿ ಯೊಂದು ಸಮುದ್ರದ ಅಲೆಗೆ ಮುಳುಗಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ನಾಪತ್ತೆ ಆದ ದುರಂತ ಘಟನೆ ಸೋಮವಾರ ಸಂಜೆ ಘಟಿಸಿದೆ.  ಮೃತ ಪಟ್ಟವರನ್ನುನಾಗೇಶ್(‌೨೯) ಮತ್ತು ನಾಪತ್ತೆ ಆದವರನ್ನು  ಸತೀಶ್‌ ( ೩೧)ಎಂದು ಗುರುತಿಸಲಾಗಿದೆ.     ನಾಡ ದೋಣಿಯು ಸಚನ್‌ ಖಾರ್ವಿಯವರಿಗೆ ಸೇರಿದ್ದು, ಮೀನುಗಾರಿಗೆ ಯಿಂದ […]

ಬ್ಯಾಡ್ಮಿಂಟನ್ ಆಡುವಾಗ ಅಸ್ವಸ್ಥಗೊಂಡಿದ್ದ ಲೋಕಾಯುಕ್ತ ಡಿವೈಎಸ್ಪಿ ಸಾವು

ಬ್ಯಾಡ್ಮಿಂಟನ್ ಆಡುವಾಗ ಅಸ್ವಸ್ಥಗೊಂಡಿದ್ದ ಲೋಕಾಯುಕ್ತ ಡಿವೈಎಸ್ಪಿ ಸಾವು  ವಿಜಯಪುರ;ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ವಸ್ಥರಾಗಿ ಲೋಕಾಯುಕ್ತ ಡಿವೈಎಸ್​ಪಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಪ್ರಕರಣ ವರದಿಯಾಗಿದೆ. ವಿಜಯಪುರ ಜಿಲ್ಲಾ ಲೋಕಾಯುಕ್ತದಲ್ಲಿ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಮೃತರು. ಇವರು ಇಂದು ವಿಜಯಪುರ ಜಿಲ್ಲಾ‌ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ವಸ್ಥರಾಗಿದ್ದರು. ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅರುಣ್ ನಾಯಕ್ ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದು, ಘಟನೆ ಕುರಿತು ಮಾಹಿತಿ ತಿಳಿದು ಆಸ್ಪತ್ರೆಗೆ ತೆರಳಿದ್ದಾರೆ.

ಕೇರಳ ಮಾಜಿ ಮುಖ್ಯಮಂತ್ರಿ‌ ಓಮೆನ್ ಚಾಂಡಿ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ

ಕೇರಳ ಮಾಜಿ ಮುಖ್ಯಮಂತ್ರಿ‌ ಓಮೆನ್ ಚಾಂಡಿ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ   ಬೆಂಗಳೂರು, ಜು 18: ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಓಮೆನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ‌ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ  ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಓಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ […]

 ಕ್ರಿಕೆಟ್ ಆಡುವಾಗ ಯುವಕ ಹೃದಯಾಘಾತದಿಂದ ಮೃತ್ಯು

ಕ್ರಿಕೆಟ್  ಆಡುವಾಗ ಯುವಕ ಹೃದಯಾಘಾತದಿಂದ ಮೃತ್ಯು ಗುಜರಾತ್‌; 20 ವರ್ಷದ ಯುವಕನೊಬ್ಬ ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುಜರಾತಿನ ಅರಾವಳಿಯಲ್ಲಿ ಯುವಕ ಹೃದಯ ಸ್ತಂಭನದಿಂದ ಮೃತ ಪಟ್ಟಿದ್ದಾನೆ. ಮಾಹಿತಿಯ ಪ್ರಕಾರ, ಪರ್ವ ಸೋನಿ ಅವರು ಅರವಳ್ಳಿಯ ಮೊಡಸದಲ್ಲಿರುವ ಗೋವರ್ಧನ್ ಸೊಸೈಟಿಯಲ್ಲಿರುವ ಶ್ರೈನ್ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಕ್ರಿಕೆಟ್ ಮೈದಾನದಲ್ಲಿ ಆಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸೋನಿ ಇಂಜಿನಿಯರಿಂಗ್ ಓದುತ್ತಿದ್ದರು. ಘಟನೆಯಿಂದ ಅವರ ಕುಟುಂಬ ದುಃಖತಪ್ತವಾಗಿದೆ.ಉತ್ತಮ ಕ್ರೀಡಾಪಟುವಾಗಿದ್ದು,  ಸೋನಿ, ಕ್ರಿಕೆಟ್ ಗೆ ಟ್ರೈನಿಂಗ್​ ಸಹ ಪಡೆಯುತ್ತಿದ್ದರು […]

ಬೆಳ್ಮಣ್: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ – ಸವಾರ ಮೃತ್ಯು

ಬೆಳ್ಮಣ್: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ – ಸವಾರ ಮೃತ್ಯು ಕಾರ್ಕಳ: ಚಲಿಸುತ್ತಿದ್ದ ಬೈಕ್ ಮೇಲೆ ಏಕಾಎಕಿ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ಕಾರ್ಕಳ ತಾಲೂಕಿನ ಬೆಳ್ಮಣ್ ಬಳಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪಿಲಾರು ನಿವಾಸಿ ಪ್ರವೀಣ್ (30) ಆಚಾರ್ಯ ಎಂದು ಗುರುತಿಸಲಾಗಿದೆ. ಬೆಳ್ಮಣ್ ಪೇಟೆಯ ಸಮೀಪದ ರಸ್ತೆ ಬದಿಯಲ್ಲಿದ್ದ ಆಲದ ಮರವೊಂದು ಬುಡಸಮೇತ ಉರುಳಿದ್ದು, ಪರಿಣಾಮ ಬೈಕ್ ನಲ್ಲಿ ಸಾಗುತ್ತಿದ್ದ ಪ್ರವೀಣ್ ಅವರ ಮೇಲೆ […]

 ಉಳ್ಳಾಲದಲ್ಲ ಮಳೆಗೆ ಮೊದಲ ಬಲಿ; ಮೋರಿ ದಾಟುತ್ತಿದ್ದ ವ್ಯಕ್ತಿ ನೀರಿಗೆ ಬಿದ್ದು ಸಾವು

ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ ಉಳ್ಳಾಲ: ಮೋರಿ‌ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯ ತಪ್ಪಿ ಮೋರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ನಡೆದಿದೆ. ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ‌(52)ಮೃತರು. ಸುರೇಶ್ ಗಟ್ಟಿ ಅವರು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಕೆಲಸ ಮುಗಿಸಿ ಮನೆಗೆ ಬರುವಾಗ ಮೋರಿ ದಾಟುತ್ತಿದ್ದ ವೇಳೆ ಕಾಲು ಜಾರಿ ಮೋರಿಗೆ ಬಿದ್ದು ಧಾರಾಕಾರ ಸುರಿಯುತ್ತಿದ್ದ ಮಳೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. […]

ಆಟೋ ರಿಕ್ಷಾ ಪಲ್ಟಿ : ಚಾಲಕ ಸ್ಥಳದಲ್ಲಿಯೇ ಮೃತ್ಯು

ವಿಟ್ಲ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಾಣಿಲದಲ್ಲಿ ನಡೆದಿದೆ. ಆಟೋ ಚಾಲಕ ಪಂಬೆತ್ತಾಡಿ ಗ್ರಾಮದ ಚೀಮುಳ್ಳು ನಿವಾಸಿ ಸುದರ್ಶನ್ (35) ಮೃತಪಟ್ಟವರು ಎಂದು ತಿಳಿದು ಬಂದಿದೆ. ಸುದರ್ಶನ್ ಹಾಗೂ ಮತ್ತೋರ್ವ ವ್ಯಕ್ತಿ ಜೂ.26ರ ಸೋಮವಾರ ಸಂಜೆ ಮಾಣಿಲ ಗ್ರಾಮದ ಬಾವಲಿಮೂಲೆಗೆ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಾಯಗೊಂಡ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯವಾಗಿರುವುದಾಗಿ ಮಾಹಿತಿ ಲಭಿಸಿದೆ. […]

ಬಸ್ ಮತ್ತು ಬೈಕ್ ನಡುವೆ ಢಿಕ್ಕಿ : ಯುವಕ-ಯುವತಿ ಸಾವು

ಕಾರ್ಕಳ: ಉಡುಪಿ ಜಿಲ್ಲೆಯ ಹೆಬ್ರಿ ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣ ರೀತಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಿವಿಲ್‌ ಎಂಜಿನಿಯರಿಂಗ್‌ ಮುಗಿಸಿ ಕಂಟ್ರಾಕ್ಟರ್‌ ಜತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಸಶಾಂಕ್ (21) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಸಹಸವಾರೆ ನಿರ್ಮಿತ(19) ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿಯಲಾಗಿದೆ. ಶಶಾಂಕ್‌ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ […]

ನಾಗಮಂಡಲದಲ್ಲಿ ಲಾರಿಗೆ ಕಾರು ಡಿಕ್ಕಿ: ನಾಲ್ವರ ಸಾವು

ನಾಗಮಂಡಲ:  ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿ ಧಾರುಣವಾಗಿ ಮೃತ ಪಟ್ಟ ಘಟನೆ ನಾಗಮಂಡಲ ತಾಲೂಕಿನ ತಿರುಮಲಪುರ ಬಳಿ ಇಂದು ಬೆಳಿಗ್ಗೆ ಘಟಿಸಿದೆ.  ಘಟನೆಯಲ್ಲಿ ನವೀನ, ಹೇಮತ್‌ ಶರತ್‌ ಹಾಗೂ ಮತ್ತೋರ್ವ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಕಡೆಯಿಂದ ಚನ್ನರಾಯನ ಪಟ್ಟಣ ಕಡೆ ಸರಕು  ಹೇರಿಕೊಂಡು ಸಾಗುತ್ತಿದ್ದ ಲಾರಿಗೆ ಕಾರು ಹಿಂದಿನಿಂದ ಗುದ್ದಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳ ದಲ್ಲಿಯೇ ಮೃತಪಟ್ಟಿದ್ದಾರೆ. ನಾಗಮಂಡಲ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.