ಮೀನುಗಾರಿಕಾ ಸಚಿವರಿಂದ ಮೂಳೂರು ಕಡಲ್ಕೊರೆತ ಪ್ರದೇಶಕ್ಕೆ ಭೇಟಿ, ಪರಿಶೀಲನೆ
ಮೂಳೂರಿನಲ್ಲಿ ತೀವ್ರ ಸ್ವರೂಪದ ಕಡಲ್ಕೊರೆತ ಪ್ರದೇಶಕ್ಕೆ ಭಾನುವಾರ ಸಂಜೆ ಮೀನುಗಾರಿಕಾ ಹಾಗೂ ಬಂದರು ಸಚಿವ ಮಾಂಕಾಳ ಎಸ್ ವೈದ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಕಾಮಗಾರಿ ಶೀಘ್ರವಾಗಿ ಪ್ರಾರಂಭಿಸಲು ಸೂಚನೆ ನೀಡಿದರು. ಈ ಸಂದರ್ಭ ಮಾದ್ಯಮ ದೊಂದಿಗೆ ಮಾತನಾಡಿದ ಸಚಿವ ಮಾಂಕಾಳ ಎಸ್ ವೈದ್ಯ, ಕಾಮಗಾರಿಯು ಕಳೆದ ಮೂರು ವರ್ಷಗಳಿಂದ ಮಂದ ಗತಿಯಲ್ಲಿ ಸಾಗುತ್ತಿರುವ ಮಾಹಿತಿ ಸಿಕ್ಕಿದೆ. ಕಾಮಗಾರಿ ವಿಳಂಬ ಆದ ಬಗ್ಗೆ ಸ್ಥಳೀಯರು ದೂರಿಕೊಂಡಿದ್ದಾರೆ. ನಿಲುಗಡೆಗೊಂಡ ಕಾಮಗಾರಿಯನ್ನು ತುರ್ತಾಗಿ ನಡೆಸುವಂತೆ ಅಧಿಕಾರಿಗಳಿಗೆ ಆದೇಶ […]