# Tags

 ಗೋಹತ್ಯೆ ನಿಷೇಧ ಕಾನೂನು ರದ್ದುಗೊಳಿಸುವ ಪ್ರಸ್ತಾವವಿಲ್ಲ: ಪರಿಷತ್​​​ನಲ್ಲಿ ಸಚಿವ ಕೆ. ವೆಂಕಟೇಶ್​ ಸ್ಪಷ್ಟನೆ

  ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವ ಕರ್ನಾಟಕ ಸರ್ಕಾರದ ಮುಂದಿಲ್ಲ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಬುಧವಾರ ವಿಧಾನ ಪರಿಷತ್ತಿಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಅಕ್ರಮ ಗೋಸಾಗಾಟ ಮಾಡುವವರ ವಿರುದ್ಧ ಕ್ರಮಕೈಗೊಂಡಿಲ್ಲ. ಗೋ ಸಂರಕ್ಷಣೆ ವಿಧೇಯಕ ಹಿಂಪಡೆಯುವ ಬಗ್ಗೆ ಸ್ಪಷ್ಟಪಡಿಸಲಿ ಎಂದು ಬಿಜೆಪಿ ಎಂಎಲ್​ಸಿ ಎನ್ ರವಿಕುಮಾರ್ ಆಗ್ರಹಿಸಿದ್ದರು. ಇದಕ್ಕೆ ಉತ್ತರಿಸಿದ ಸಚಿವರು, ‘ಕರ್ನಾಟಕ ವಧೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆ’ಯನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಹೇಳಿದ್ದಾರೆ. […]