ಕೇರಳಕ್ಕೆ ಮುಂಗಾರು ಆಗಮನ: ಮಳೆ ಆರಂಭ
ತಿರುವನಂತಪುರ: ಗುರುವಾರ ಕೇರಳಕ್ಕೆ ಮಾನ್ಸೂನ್ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ಜೂನ್ 1 ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತಿದ್ದು, ಈ ವರ್ಷ 7 ದಿನ ತಡವಾಗಿ ಕೇರಳಕ್ಕೆ ಮುಂಗಾರು ಆಗಮಿಸಿದೆ. ಇಂದು ಬೆಳಗ್ಗೆಯಿಂದಲೇ ಕೇರಳದ ಎಲ್ಲಾ ಭಾಗಗಳಲ್ಲಿ ಮಳೆ ಆರಂಭವಾಗಿದೆ. ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ವ್ಯಾಪಕ ಮಳೆಯಾಗಿದೆ. ಈ ಪರಿಸ್ಥಿತಿಗಳನ್ನು ಪರಿಗಣಿಸಿ, ನೈಋತ್ಯ ಮಾನ್ಸೂನ್ ಕೇರಳಕ್ಕೆ ಕಾಲಿಟ್ಟಿದೆ ಎಂದು ಹೇಳಬಹುದು ಭಾರತೀಯ ಹವಾಮಾನ ಸಂಸ್ಥೆ ಹೇಳಿದೆ. ಕರ್ನಾಟಕವೂ ಸೇರದಂತೆ ಅನೇಕ […]