‘ಪ್ರವಾಸ ಸೆಲ್ಫಿಗೆ ಸೀಮಿತವಾಗದಿರಲಿ’ ಆಳ್ವಾಸ್ನಲ್ಲಿ ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್
ವಿದ್ಯಾಗಿರಿ (ಮೂಡುಬಿದಿರೆ): ಪ್ರವಾಸ ಕಥನ ಎಂದರೆ ಕೇವಲ ಫೋಟೊ, ಸೆಲ್ಫಿಗಳಲ್ಲ. ಅಂತರದೃಷ್ಟಿಯಿಂದ ಆಸ್ವಾದಿಸುವುದು, ಧ್ಯಾನಸ್ಥ ಸ್ಥಿತಿಯಲ್ಲಿ ಗ್ರಹಿಸುವುದು, ಬದ್ಧತೆಯಿಂದ ಬರೆಯುವುದು ಎಂದು ಸಾಹಿತಿ, ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಇಂಗ್ಲಿಷ್ ವಿಭಾಗವು ಕುವೆಂಪು ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡ ‘ಫಿಲೊಕಲಿʼ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ಬದುಕೊಂದು ಚಲನೆ. ನಾವೆಲ್ಲ ಅಲೆಮಾರಿ. ರಾಮನ ಚಲನೆಯೇ ರಾಮಾಯಣ. ಡಾರ್ವಿನ್ ಚಲನೆಯ ಪ್ರತಿಫಲವೇ ವಿಕಾಸವಾದ ಹೀಗೆ ಪುರಾಣ, ಇತಿಹಾಸ, ವಿಜ್ಞಾನ, ಜನಪದ ಎಲ್ಲವೂ ಚಲನೆಯನ್ನು ಆಧರಿಸಿವೆ […]