# Tags

ಉದ್ಯಾವರ : ಎಸ್.ಎಫ್.ಎಕ್ಸ್ ಆಂಗ್ಲ ಮಾಧ್ಯಮ ಶಾಲೆ 100 ಪ್ರತಿಶತ ಸಾಧನೆ (Udyawara SFX English Mediem school 100% result in SSLC)

ಉದ್ಯಾವರ : ಎಸ್.ಎಫ್.ಎಕ್ಸ್ ಆಂಗ್ಲ ಮಾಧ್ಯಮ ಶಾಲೆ 100 ಪ್ರತಿಶತ ಸಾಧನೆ (Udupi) ಉಡುಪಿ : ಉದ್ಯಾವರ ಗ್ರಾಮೀಣ ಭಾಗದಲ್ಲಿನ ಮೇಲ್ಪೇಟೆಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯು ಎಸ್ ಎಸ್ ಎಲ್ ಸಿ ಯಲ್ಲಿ 100 ಪ್ರತಿಶತದೊಂದಿಗೆ ವಿಶೇಷ ಸಾಧನೆ ಮಾಡಿದೆ.   58 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 16 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು 41 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ  ತೇರ್ಗಡೆಯಾಗಿದ್ದಾರೆ.  ಕಳೆದ ಆರು ವರ್ಷಗಳಿಂದ ಎಸ್ ಎಸ್ ಎಲ್ ಸಿ ಯಲ್ಲಿ ಸತತ 100 […]

ಉದ್ಯಾವರ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ  ವಾರ್ಷಿಕ ಮಹೋತ್ಸವದ ಅಂಗವಾಗಿ ಸಂಜಾ ಪ್ರಾರ್ಥನೆ (An evening Prayer as part of the annual Jublee of the Shrine of St Francis Xavier)

ಉದ್ಯಾವರ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ  ವಾರ್ಷಿಕ ಮಹೋತ್ಸವದ ಅಂಗವಾಗಿ ಸಂಜಾ ಪ್ರಾರ್ಥನೆ  ಉದ್ಯಾವರ: ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯ ಉದ್ಯಾವರ ಇಲ್ಲಿಯ ವಾರ್ಷಿಕ ಮಹೋತ್ಸವದ ಅಂಗವಾಗಿ ಸಂಜಾ ಪ್ರಾರ್ಥನಾ ವಿಧಿ ವಿಧಾನಗಳು ಭಕ್ತಿಯಿಂದ ನಡೆಯಿತು. ಇದಕ್ಕೂ ಮೊದಲು ಸಂತ ಫ್ರಾನ್ಸಿಸ್ ಝೆವಿಯರ್ ಆಂಗ್ಲ ಮಾಧ್ಯಮ ಶಾಲೆ ಮೇಲ್ಪೇಟೆಯಿಂದ ಸಂತ ಫ್ರಾನ್ಸಿಸ್ ಝೆವಿಯರ್ ರವರ ಪವಾಡ ಮೂರ್ತಿಯ ಭವ್ಯ ಮೆರವಣಿಗೆ ನಡೆಯಿತು.  ಸಂಜಾ ಪ್ರಾರ್ಥನಾ ವಿಧಿ ವಿಧಾನಗಳ ನೇತೃತ್ವ ವಹಿಸಿದ್ದ ಉಡುಪಿ ಶೋಕ ಮಾತ ದೇವಾಲಯದ ಸಹಾಯಕ […]

ಉದ್ಯಾವರ : ಭಾತೃತ್ವ ಮತ್ತು ಐಕ್ಯತೆಯ ಭಾನುವಾರ ಆಚರಣೆ (A Sunday Celebration Of Brotherhood and Unity)

ಉದ್ಯಾವರ : ಭಾತೃತ್ವ ಮತ್ತು ಐಕ್ಯತೆಯ ಭಾನುವಾರ ಆಚರಣೆ (A Sunday Celebration Of Brotherhood and Unity) (Udyavara) ಉದ್ಯಾವರ: 150ಕ್ಕೂ ಅಧಿಕ ವರ್ಷಗಳ ಇತಿಹಾಸ ಇರುವ ಉದ್ಯಾವರದ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ (Udyavara st Francis zaviers Church)ವಾರ್ಷಿಕ ಮಹೋತ್ಸವವು ಡಿಸೆಂಬರ್ ಐದು ಮತ್ತು ಆರರಂದು ವಿಜೃಂಭಣೆಯಿಂದ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ನಿನ್ನೆ ಡಿ. 3 ರoದು ಭಾತೃತ್ವ ಮತ್ತು ಐಕ್ಯತೆಯ ಭಾನುವಾರವನ್ನು ಸಂಭ್ರಮದಿಂದ ಆಚರಿಸಲಾಯಿತು.  ಪ್ರಧಾನ ಬಲಿ ಪೂಜೆಯ ನೇತೃತ್ವ […]

ಕಾಪು ಪೊಲೀಸರಿಂದ ಚಿನ್ನಾಭರಣ ಕಳ್ಳನ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶ

ಕಾಪು ಪೊಲೀಸರಿಂದ ಚಿನ್ನಾಭರಣ ಕಳ್ಳನ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶ ಉಡುಪಿ: ಉದ್ಯಾವರ ಬೊಳ್ಜೆ ನಿವಾಸಿ ಅನಿತಾ ಡಿ. ಸಿಲ್ವಾ ಅವರ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನನ್ನು ಕಾಪು ಪೊಲೀಸರು ಬಂಧಸಿದ್ದು ಚಿನ್ನಾಭರಣ, ನಗದು, ಸ್ಕೂಟಿ ಸಹಿತ ೮,೦೨,೦೮೩ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಟಪಾಡಿ ಏಣಗುಡ್ಡೆ ಗ್ರಾಮದ ಅಚ್ಚಡ ನಿವಾಸಿ ಜೋನ್ ಪ್ರಜ್ವಲ್ ಫೆರ್ನಾಂಡಿಸ್ (೩೨) ಬಂಧಿತ ಆರೋಪಿ. ಬಂಧಿತನಿಂದ ೬,೯೦,೭೧೩ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು, ಮೋಟಾರು ಸೈಕಲ್ ಸಹಿತ ಬೆಲೆಬಾಳುವ […]

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರ ಪಕ್ಷಿಯನ್ನು ರಕ್ಷಿಸಿದ ತಂದೆ- ಮಗ..!

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರ ಪಕ್ಷಿಯನ್ನು ರಕ್ಷಿಸಿದ ತಂದೆ- ಮಗ..!  ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿ ನವಿಲನ್ನು ತಂದೆ ಹಾಗೂ‌ ಮಗ ರಕ್ಷಣೆ ಮಾಡಿದ ಘಟನೆ ಉದ್ಯಾವರ ಕಲಾಯಿಬೈಲ್ ಎಂಬಲ್ಲಿ ನಡೆದಿದೆ.   ನವಿಲೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದು‌ ಹೊರಗೆ ಬರಲು ಆಗದೆ ಒದ್ದಾಡುತ್ತಿತ್ತು.   ಇದನ್ನು ಕಂಡ ವಿಜಯಕುಮಾರ್ ಹಾಗೂ ಅವರ ಮಗ ವಿಶಾಲ್ ಅವರು ನವಿಲಿನ ರಕ್ಷಣೆಗೆ ಮುಂದಾದರು. ವಿಶಾಲ್ ಹಗ್ಗದ ಸಹಾಯದಿಂದ ಬಾವಿಗೆ ಇಳಿದು, ಕಾಲಿನ ಮೂಲಕ ನವಿಲನ್ನು ಮೇಲೆತ್ತಿದರು. ಬಳಿಕ ವಿಜಯಕುಮಾರ್ ನವಿಲನ್ನು‌ ಹಿಡಿದು […]

 ಉದ್ಯಾವರ ಶ್ರೀ ಗಣಪತಿ ದೇವಸ್ಥಾನದ ವತಿಯಿಂದ ಪರಿವಾರ ದೈವಗಳಿಗೆ ನೇಮ

 ಪುರಾಣ ಪ್ರಸಿದ್ಧ ಉದ್ಯಾವರ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ವತಿಯಿಂದ ಪರಿವಾರ ದೈವಗಳಾದ ವಾರ್ತಾಳಿ ಪಾಶಾಣ ಕಲ್ಲುರ್ಟಿ ದೈವದ ಸಿರಿ ಸಿಂಗಾರದ ನೇಮ ಜರಗಿತು.  ಮೊದಲಿಗೆ ನವಕ ಪ್ರಧಾನ ಕಲಶ ಅಭಿಷೇಕ, ಭಂಡಾರ ಇಳಿದು ಮಹಾ ಅನ್ನಸಂತರ್ಪಣೆ   ಸಂಪನ್ನಗೊಂಡಿತು ಇದೇ ಸಂದರ್ಭ ದರ್ಶನ ಸೇವೆ ಸಂಪನ್ನ ಗೊಂಡಿತು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಯು ಪ್ರಭಾಕರ್ ರಾವ್, ಕಾರ್ಯಧ್ಯಕ್ಷ ಕಿದಿಯೂರು ಉದಯಕುಮಾರ್ ಶೆಟ್ಟಿ, ಕಾರ್ಯದರ್ಶಿ ಸುರೇಶ್ ಆಚಾರ್ಯ ಕೋಶಾಧಿಕಾರಿ ಶ್ರೀನಿವಾಸ್ ಯು ಬಿ, ಗಣಪತಿ ಕಾರಂತ್‌, […]

ಉದ್ಯಾವರ : ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

 ಉದ್ಯಾವರ : ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತ ವೆಂಕಟರಮಣ ಸ್ಪೋರ್ಟ್ಸ್ ಮತ್ತು ಕಲ್ಚರಲ್ (ರಿ) ಪಿತ್ರೋಡಿ, ಉದ್ಯಾವರ ಇವರ ನೇತೃತ್ವದಲ್ಲಿ ಇತ್ತೀಚಿಗೆ ನಿಧನರಾಗಿದ್ದ ಸಂಸ್ಥೆಯ ಮಾಜಿ ಅಧ್ಯಕ್ಷ, ಪ್ರಖ್ಯಾತ ಟೆನ್ನಿಸ್ ಬಾಲ್ ಕ್ರಿಕೆಟಿಗ ಸಿಎ ಮಲ್ಲೇಶ್ ಬಂಗೇರ ಇವರ ಸ್ಮರಣಾರ್ಥ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ ನಡೆಯಿತು. ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ಅಳವಡಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ದಿವಂಗತ ಮಲ್ಲೇಶ್ ರವರ ತಾಯಿ ಬೇಬಿ ಬಂಗೇರ ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ದಿವಂಗತ […]