ಉಡುಪಿ ಜಿಲ್ಲಾಧಿಕಾರಿಯವರನ್ನು ಭೇಟಿಯಾದ ಕಸಾಪ ನಿಯೋಗ
ಉಡುಪಿ : ಉಡುಪಿಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀಮತಿ ವಿದ್ಯಾಕುಮಾರಿ ಅವರನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಸ್ವಾಗತಿಸಿ ಗೌರವಿಸಲಾಯಿತು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಅಪರ ಜಿಲ್ಲಾಧಿಕಾರಿ ಶ್ರೀಮತಿ ವೀಣಾ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ನರಸಿಂಹ ಮೂರ್ತಿ ರಾವ್, ಭುವನಪ್ರಸಾದ ಹೆಗ್ಡೆ, ರಾಮಾಂಜಿ ಉಪಸಿತರಿದ್ದರು. ಈ ಸಂದರ್ಭದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಜಿಲ್ಲಾಧಿಕಾರಿಯವರಿಂದ ಸಹಕಾರಕೊರಲಾಯಿತು.